ದೇವರಿಗೆ ಪೂಜೆ ಪ್ರಾರ್ಥನೆ ಯಾಕೆ ಮಾಡಬೇಕು?
ನಾವು ದೇವರ ಪೂಜೆ ಮಾಡದಿದ್ದರೆ, ಏನಾಗುತ್ತದೆ? ಪೂಜೆ ಯಾಕೆ ಮಾಡಬೇಕು? ಪ್ರಾರ್ಥನೆ ಯಾಕೆ ಮಾಡಬೇಕು? ಬಹಳ ಜನರನ್ನು ಕಾಡುವ ಪ್ರಶ್ನೆಯಿದು. ಕಾಣದ ದೇವರಿಗೆ ಪೂಜೆ ಯಾಕೆ ಮಾಡಬೇಕು? ದೇವರ ಪೂಜೆಯಿಂದ ನಿಜವಾಗಿಯೂ ಲಾಭವಿದೆಯೇ?
"ಪೂಜೆ" ಎನ್ನುವುದು ಒಂದು ಯೋಗ ಶಾಸ್ತ್ರದ ಪದ್ಧತಿ. ಸಾಧನೆಗೆ ಅನು ಸಂಧಾನವಾದ ಪ್ರಕ್ರಿಯೆ ಎಂಬ ಪರಮಾರ್ಥ ಸೃಷ್ಟಿ, ಸ್ಥಿತಿ, ಲಯಗಳೆಂಬ ಜೀವನ ವ್ಯವಸ್ಥೆಗೆ ಕಾರಣವಾದ ದೇವಾನು ದೇವನಿಗೆ ಸರ್ವೋತ್ತಮನಿಗೆ ಕೃತಜ್ಞತೆ ಸಲ್ಲಿಸುವ ಧಾರ್ಮಿಕ ವಿಧಾನವೇ ಪೂಜೆ.
ಪೂಜೆ ಮಾಡದೇ ಇದ್ದರೇ ಏನಾಗುತ್ತದೆಯೋ ಗೊತ್ತಿಲ್ಲ. ಆದರೆ, ಪ್ರತಿನಿತ್ಯವೂ ಪೂಜೆ ಮಾಡಿದರೆ, ಮಾತ್ರ ನಮ್ಮ ಜೀವನಕ್ಕೇನು ಬೇಕೋ ಎಲ್ಲವೂ ಸಿಗುತ್ತವೆ. ಶಾಂತಿ, ನೆಮ್ಮದಿ, ನಂಬಿಕೆ, ಸಂತೋಷ, ಸಹೃದಯತೆ, ಶ್ರದ್ಧೆ, ಆರಾಧನೆ, ಐಕ್ಯತೆ, ಮುಂತಾದ ಶಕ್ತಿ ಕ್ರಿಯೆಗಳು ಲಭಿಸುತವೆ.
ಅವಶ್ಯ ಮನುಭೋಕ್ತವ್ಯಂ ಗತಂ ಜನ್ಮಶುಭಾಶುಭಂ
ಗತ ಜನ್ಮದಲ್ಲಿ ಮಾಡಿರುವ ಪಾಪ ಪುಣ್ಯಗಳನ್ನೇ ನಾವು ಈ ಜನ್ಮದಲ್ಲಿ ಅನುಭವಿ ಸುತ್ತಿದ್ದೇವೆ. ಅಂದಮೇಲೆ ಗತ ಜನ್ಮದ ಕಾರಣ ದಿಂದ ಬಂದ ಕಷ್ಟಗಳನ್ನು ಈಗ ಅನುಭವಿಸ ಬೇಕಾಗಿ ಬಂದಿದೆ. ಈಗ ಮಾಡುವ ಪೂಜೆಗೂ ಕಷ್ಟಗಳಿಗೂ ಸಂಬಂಧವಿಲ್ಲ. ನಾವೀಗ ಮಾಡುವ ಪೂಜಾಫಲದಿಂದ ಕಷ್ಟ ನಿವಾರಣೆಯಾಗದಿದ್ದರೂ. ಉಪಶಮನ ಸಿಗುತ್ತದೆ. ಸಹನಾ ಶಕ್ತಿ ಸಿಗುತ್ತದೆ. "ಗತ ಜನ್ಮದ ರೋಗಕ್ಕೆ" ಈ "ಜನ್ಮದ ಔಷಧಿಯೇ ಪೂಜೆ.
ಪ್ರಾರ್ಥನೆ ಪೂಜೆ ನಂಬಿದವರಿಗೆ ದೇವರಿದ್ದಾನೆ", ಎಂಬುದಕ್ಕೆ ಸಾಕ್ಷಿಯಾಗುವ ಸ್ವಾರಸ್ಯಕರ ಪ್ರಸಂಗವೊಂದು ಇಲ್ಲಿದೆ.??
ಒಂದು ನಗರದಲ್ಲಿ ಔಷಧ ಅಂಗಡಿ ಹೊಂದಿದ್ದ ವ್ಯಕ್ತಿಯೊಬ್ಬ ದೇವರನ್ನು ನಂಬದ ಪರಮ "ನಾಸ್ತಿಕನಾಗಿದ್ದ". ಆದರೆ ಜನ ಸೇವೆಯೆಂಬ ಕಾಯಕದಿಂದ ಅಚ್ಚು ಮೆಚ್ಚಿನವನಾಗಿದ್ದ.
ಒಂದು ದಿನ ರಾತ್ರಿ ಜೋರಾಗಿ ಮಳೆ ಸುರಿಯ ಲಾರಂಭಿಸಿದಾಗ ವಿದ್ಯುತ್ ಕಡಿತವಾಯಿತು. ಆ ವೇಳೆಯಲ್ಲಿ ಮಳೆಯಲ್ಲಿ ತೋಯ್ದು ಹೋಗಿದ್ದ ಬಾಲಕನೊಬ್ಬ ಓಡೋಡಿ ಬಂದು ಅನಾರೋಗ್ಯ ಪೀಡಿತ ಳಾಗಿರುವ ತನ್ನ ತಾಯಿಗೆ ತುರ್ತಾಗಿ ಔಷಧ ಕೊಡುವಂತೆ ಕೋರಿ ಔಷಧ ಚೀಟಿಯನ್ನು ಕೊಟ್ಟ. ಅಂಗಡಿ ಮಾಲೀಕ ಒಲ್ಲದ ಮನಸ್ಸಿನಿಂದಲೇ ಟಾರ್ಚ್ ಬೆಳಕಿನಲ್ಲಿ ತಡಕಾಡಿ ಔಷಧ ಕೊಟ್ಟು ಕಳಿಸಿದ.
ಕೊಂಚ ಹೊತ್ತಲ್ಲಿ ಮಳೆ ನಿಂತು, ವಿದ್ಯುತ್ ದೀಪಗಳು ಬೆಳಗಿದವು. ಅಷ್ಟರಲ್ಲಿ ಅಂಗಡಿ ಮಾಲೀಕ, ತಾನು ಕತ್ತಲಲ್ಲಿ ಬಾಲಕನಿಗೆ ಕೊಟ್ಟ ಔಷಧಗಳತ್ತ ಗಮನ ಹರಿಸಿ ಹೌಹಾರಿದ. ಅದು ಮನುಷ್ಯರು ಸೇವಿಸುವ ಔಷಧವಾಗಿರದೆ ಕ್ರಿಮಿ ನಾಶಕದ ಬಾಟಲಿಯಾಗಿತ್ತು.
ತನ್ನಿಂದ ಅಮಾಯಕ ಜೀವ ವೊಂದು ಬಲಿಯಾಗುತ್ತದಲ್ಲ ಎಂಬ ಪಾಪ ಪ್ರಜ್ಞೆಯೂ? ಜೊತೆಗೆ ಆ ಬಾಲಕ ಅನಾಥ ನಾಗುತ್ತಾನಲ್ಲ, ಎಂಬ ಅಪರಾಧ ಪ್ರಜ್ಞೆಯೂ ಕಾಡಿತು. ಏನು ಮಾಡಬೇಕೆಂಬುದನ್ನರಿಯದೆ ಈ ದುರಂತವನ್ನು ಹೇಗೆ ತಪ್ಪಿಸಲಿ ಎಂದು ಯೋಚಿಸುತ್ತಾನೆ.
ಆಗ ಆತನಿಗೆ ಗೋಡೆಯಲ್ಲಿ ತೂಗುಹಾಕಿದ್ದ ದೇವರ "ಚಿತ್ರ ಪಟವೊಂದು" ಕಣ್ಣಿಗೆ ಬಿತ್ತು. ಬೇಡವೆಂದರೂ ಒತ್ತಾಯ ದಿಂದ ಆತನ ತಂದೆ ಅದನ್ನಲ್ಲಿ ತೂಗು ಹಾಕಿದ್ದರು. "ಯಾವುದೇ ಸಂದರ್ಭದಲ್ಲಿ ಪರಿಸ್ಥಿತಿ ನಿನ್ನ ಕೈಮೀರಿ ಹೋದಾಗ, ಅಸಹಾಯ ಸ್ಥಿತಿಯಲ್ಲಿದ್ದಾಗಲಾದರೂ ಈ ಚಿತ್ರ ಪಟಕ್ಕೆ ಕೈಮುಗಿದು ಮನಃಪೂರ್ವಕವಾಗಿ ಪ್ರಾರ್ಥಿಸು, ದಾರಿಯೊಂದು ಗೋಚರವಾಗುತ್ತದೆ" ಎಂದು ಅಪ್ಪ ಹೇಳಿದ್ದ ಮಾತು ಆ ಕ್ಷಣಕ್ಕೆ ನೆನಪಿಗೆ ಬಂತು. ಎಂದೂ ದೇವರಿಗೆ ಕೈ ಮುಗಿಯದಿದ್ದ ಆತ ಮೊದಲ ಬಾರಿಗೆ ಕೈಮುಗಿದು ಪ್ರಾರ್ಥನೆ ಸಲ್ಲಿಸಿದ.
ಕೆಲವೇ ಕ್ಷಣಗಳಲ್ಲಿ ಪವಾಡವೊ? ಎಂಬಂತೆ ಔಷಧ ತೆಗೆದುಕೊಂಡು ಹೋಗಿದ್ದ ಬಾಲಕ ಏದುಸಿರು ಬಿಡುತ್ತ ಓಡೋಡಿ ಅಂಗಡಿಗೆ ಬಂದು ಅಂಕಲ್ ಜೋರು ಮಳೆಯಲ್ಲಿ ನಾನು ಓಡೋಡಿ ಹೋಗುತ್ತಿದ್ದಾಗ ನೀವು ಕೊಟ್ಟಿದ್ದ ಔಷಧ ಬಾಟಲಿ ಕೈಜಾರಿ ಕೆಳಗೆ ಬಿದ್ದು ಒಡೆದು ಹೋಯಿತು, ನನಗೆ ಇನ್ನೊಂದು ಔಷಧ ಬಾಟಲಿ ಕೊಡಿ, ಆದರೆ ನನ್ನಲ್ಲಿ ಈಗ ಕೊಡಲು ಹಣವಿಲ್ಲ' ಎಂದು ಗಾಬರಿಯಿಂದ ಒಂದೇ ಉಸಿರಿಗೆ ಹೇಳಿ ಕಣ್ಣೀರು ಹಾಕಿದ.
ಆಗ ಅಂಗಡಿಯವನು ಆ ಬಾಲಕನನ್ನು ತಬ್ಬಿಕೊಂಡು, ಆತನಿಗೆ ಬೇಕಾದ ಔಷಧದ ಜೊತೆಗೆ ಕೊಂಚ ಹಣವನ್ನೂ ಕೊಟ್ಟು ಕಳಿಸಿದ. ನಾಸ್ತಿಕನಾಗಿದ್ದರೂ ಪರಿಶುದ್ಧ ಮನಸ್ಸಿನಿಂದ ಆತ ಮೊದಲ ಬಾರಿಗೆ ದೇವರಲ್ಲಿ ಮೊರೆ ಇಟ್ಟು ಮಾಡಿದ ಪ್ರಾರ್ಥನೆ ಕೈಗೂಡಿತ್ತು. ಮನುಜ ಶುದ್ಧ ಭಕ್ತಿಯ ಮೂಲಕ ಮೋಕ್ಷವನ್ನು ಪಡೆಯಬಹುದು.
ಸರ್ವಶಕ್ತನಾದ ಭಗವಂತನಲ್ಲಿ ಅನುದಿನ-ಅನುಕ್ಷಣ ಪ್ರಾರ್ಥನೆ ಸಲ್ಲಿಸುತ್ತಿರ ಬೇಕು. ನಿಷ್ಕಲ್ಮಶ ಮನದಿಂದ ಪ್ರಾರ್ಥನೆ ಸಲ್ಲಿಸಿದಾಗ ಅಸಾಧ್ಯವೂ ಸಾಧ್ಯವಾಗುತ್ತದೆ!
No comments:
Post a Comment