Sunday, February 18, 2024

Vishnu Sahasranama

ಸರ್ವಶ್ರೇಷ್ಠವಾದ ಶ್ರೀ ವಿಷ್ಣು ಸಹಸ್ರನಾಮ


೧. ವಿಷ್ಣು ಸ್ವತಃ ತನ್ನ ಹೆಸರಿನ ಅತೀಂದ್ರಿಯ ಧ್ವನಿಯಲ್ಲಿ ಸಂಪೂರ್ಣವಾಗಿ ಅಸ್ತಿತ್ವದಲ್ಲಿರುತ್ತಾನೆ. ಹಾಗಾಗಿ ವಿಷ್ಣು ಸಹಸ್ರನಾಮವನ್ನು ಹೆಚ್ಚು ಹೆಚ್ಚು ಕಾಲ ಪಠಣ ಮಾಡಿದÀರೆ ಒಳ್ಳೆಯದು.

೨. ವಿಷ್ಣು ಸಹಸ್ರನಾಮದಲ್ಲಿ ಎಲ್ಲಾ ವೈದಿಕ ಮಂತ್ರಗಳನ್ನು ಸೇರಿಸಲಾಗುತ್ತದೆ. ಆದ್ದರಿಂದ ಈ ಮಂತ್ರವನ್ನು ಪಠಿಸುವ ಮೂಲಕ ಹೇಳುವವರಿಗೆ ಅಷ್ಟೇ ಅಲ್ಲ ಕೇಳುವವರು ಕೂಡ ಪ್ರಯೋಜನ ಪಡೆಯುತ್ತೀರಿ.

೩.  ವಿಷ್ಣು ಸಹಸ್ರನಾಮ ಪಾರಾಯಣಕ್ಕೂ ಭೇದವೇನೂ ಇರುವುದಿಲ್ಲ. ಹಾಗೆ ಪಠಣಕ್ಕಾಗಿ ಯಾವುದೇ ಕಠಿಣ ಮತ್ತು ವೇಗದ ನಿಯಮಗಳಿಲ್ಲ. ಯಾವುದೇ ಸಂದರ್ಭದಲ್ಲಿ ಯಾವುದೇ ಸಮಯದಲ್ಲಿ ನೀವು ಎಲ್ಲಿಯಾದರೂ ಪಠಿಸಬಹುದು.

೪. ವಿಷ್ಣು ಸಹಸ್ರನಾಮವನ್ನು ಪಠಿಸುವುದರಿಂದ  ನಿಮ್ಮ ಹಿಂದಿನ ಜನ್ಮದ ಕರ್ಮದ ಪ್ರತಿಕ್ರಿಯೆಗಳಿಂದ ನಿಮ್ಮನ್ನು ಮುಕ್ತಗಒಳಿಸುತ್ತದೆ.

೫.  ವಿಷ್ಣು ಸಹಸ್ರನಾಮ ಪಠಸುವ ಭಕ್ತರಿಗೆ ಎಂದು ಭಯವಿಲ್ಲ. ಇದರಿಂದ ವಿಶೇಷ ಶಾಂತಿ, ವಚ್ಸು÷್ಸ, ಆತ್ಮವಿಶ್ವಾಸ, ಮನೋಬಲ, ದೇಹಬಲ ಇಂದ್ರಿಯಬಲ ಹೆಚ್ಚಾಗಿ ಉತ್ತಮ ಆರೋಗ್ಯವನ್ನು ಪಡೆಯಬಹುದು.

೬.  ವಿಷ್ಣು ಸಹಸ್ರನಾಮವನ್ನು ಪ್ರತಿನಿತ್ಯ ಪಾರಾಯಣ ಮಾಡಿದರೆ ಜೀವನದಲ್ಲಿ ಬರುವ ಸಂಕಷ್ಟಗಳು ಪರಿಹಾರವಾಗುತ್ತವೆ.

೭. ಶುದ್ಧ ಮನಸ್ಸಿನಿಂದ  ವಿಷ್ಣು ಸಹಸ್ರನಾಮವನ್ನು ಪಠಿಸಿದರೆ ಆಧ್ಯಾತ್ಮಿಕ, ಆದಿ ದೈವಿಕ ಹಾಗೂ ಆದಿ ಭೌತಿಕ ಪೀಡೆಗಳಿಗೆ ಪರಿಹಾರ ದೊರೆಯುತ್ತದೆ. 

೮.  ವಿಷ್ಣು ಸಹಸ್ರನಾಮ ಅಂದರೆ ಮಾಹಾವಿಷ್ಣುವಿನ ಸಹಸ್ರನಾಮ ಪಠಣ ಇದರಲ್ಲಿ ಅಲೌಕಿಕ ಶಕ್ತಿ ಇರುವುದನ್ನು ಅನೇಕ ಸಾಧಕರು ಕಂಡಿದ್ದಾರೆ, ಅನುಭವಿಸಿದ್ದಾರೆ.  ವಿಷ್ಣು ಸಹಸ್ರನಾಮ ಪಾರಾಯಣದಿಂದ ಕ್ಯಾನ್ಸರ್ ನಂತಹ ಭಯಂಕರ ಖಾಯಿಲೆಯಿಂದ ಹಿಡಿದು ಇನ್ನು ಇತರೆ ಕಾಯಿಲೆಗಳು ಕೂಡ ವಾಸಿಯಾಗುತ್ತವೆ.

೯. ಮನೆಯಲ್ಲಿ ಸಾಮೂಹಿಕ ಪಾರಾಯಣ ಪಠಿಸಿದರೆ ಮನೆಯ ವಾತಾವರಣವೇ ಬದಲಾಗುತ್ತದೆ. ಮನೆಯಲ್ಲಿ ಮೈಯಲ್ಲಿ ಮನಸ್ಸಿನಲ್ಲಿ ಆಧ್ಯಾತ್ಮಿಕ ಶಕ್ತಿ ಸಂಚಾರವಾದಂತಹ ಅನುಭವವಾಗುತ್ತದೆ. ಸಾಮೂಹಿಕ ಪಾರಾಯಣದಲ್ಲಿ ವಿಶೇಷ ಶಕ್ತಿ ಇದೆ.

೧೦.  ವಿಷ್ಣು ಸಹಸ್ರನಾಮಕ್ಕೆ ಗಂಡಸು-ಹೆಂಗಸು-ಶೂದ್ರ-ಬ್ರಾಹ್ಮಣ ಎನ್ನುವ ಭೇದವಿಲ್ಲ. ಅದು ಎಲ್ಲಾ ವರ್ಣಾಶ್ರಮದವರಿಗೆ ಭಗವಂತ ನೀಡಿದ ಪಂಚಮ ವೇದ ಇದಾಗಿದೆ. ಹಾಗಾಗಿ ಈ ಸ್ತೂತ್ರವನö್ನೆಲ್ಲ ವರ್ಗದವರು ಮತ್ತು ಎಲ್ಲ ವಯಸ್ಸಿನವರು ಪಠಿಸಬಹುದಾಗಿದೆ.

೧೧. ಧಾರ್ಮಿಕ ಶ್ರದ್ಧಾ ಕೇಂದ್ರಗಳಿಗೆ ಭೇಟಿ ನೀಡಿ ನಾವಾಗಿಯೇ ಪಠಣ ಮಾಡಿ ಬರಬಹುದು. ಸಮಯವಿಲ್ಲದವರು ತಮ್ಮ ತಮ್ಮö ಮನೆಯಲ್ಲಿಯೇ ನಿತ್ಯ ಪಠಣ ಮಾಡಿದರೆ ನಮಗೂ ಹಾಗೂ ನಮ್ಮ ಸುತ್ತಮುತ್ತಲಿನ ಪರಿಸರಕ್ಕೂ ವಿಶೇಷ ಶಕ್ತಿ ಪ್ರಾಪ್ತಿಯಾಗುವುದು.

೧೨. ಪ್ರಾಕೃತಿಕ ಸಮತೋಲನಕ್ಕಾಗಿ, ಗ್ರಾಮದ ಶಾಂತಿಗಾಗಿ, ಕುಟುಂಬ ರಕ್ಷಣೆಗಾಗಿ, ನಮ್ಮೆಲ್ಲರ ಉನ್ನತಿಗಾಗಿ ನಿತ್ಯ ಪಠಿಸೋಣ.

No comments:

Post a Comment